ಹಿರಿಯ ಪತ್ರಕರ್ತೆ ಡಾ.ಯು.ಬಿ ರಾಜಲಕ್ಷ್ಮಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

477

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2020ನೇ ಸಾಲಿನ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಹಿರಿಯ ಪತ್ರಕರ್ತೆ ಡಾ.ಯು.ಬಿ ರಾಜಲಕ್ಷ್ಮಿ ಅವರಿಗೆ ಲಭಿಸಿದೆ. ಇದುವರೆಗೆ ಈ ಪ್ರಶಸ್ತಿಯನ್ನ 26 ಜನ ಹಿರಿಯ ಪತ್ರಕರ್ತರು ಪಡೆದಿದ್ದು, ಇವರು 27ನೇಯವರಾಗಿದ್ದಾರೆ. ಪ್ರಶಸ್ತಿ 15 ಸಾವಿರ ರೂಪಾಯಿ ನಗದು ಹಾಗೂ ಫಲಕ ಹೊಂದಿದೆ.

ಡಾ.ಯು.ಬಿ ರಾಜಲಕ್ಷ್ಮಿ ಹಿನ್ನೆಲೆ

ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಇವರು ಕಳೆದ 37 ವರ್ಷಗಳಿಂದ ಪತ್ರಿಕಾರಂಗದಲ್ಲಿದ್ದಾರೆ. ಹೊಸ ದಿಗಂತ, ಮುಂಗಾರು, ಟೈಮ್ಸ್ ಆಫ್ ಡೆಕ್ಕನ್ ದಿನಪತ್ರಿಕೆಗಳಲ್ಲಿ ಕೆಲಸಮಾಡಿ, 1987 ರಲ್ಲಿ ತರಂಗ ವಾರಪತ್ರಿಕೆಯಲ್ಲಿ ಕೆಲಸ ಆರಂಭಿಸಿದರು. ಇದೀಗ ಇಲ್ಲಿ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಹಲವು ಕೃತಿಗಳನ್ನ ರಚಿಸಿರುವ ಇವರು, ಸಾಕ್ಷ್ಯಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಮಲೇಷ್ಯಾ ಸರ್ಕಾರದ ಆಹ್ವಾನದ ಮೇರೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು. ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯಗಳಲ್ಲಿ ಪರಿಣತಿ ಹೊಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!