ಬಿಜೆಪಿ ಪ್ರಚಾರದಿಂದ ಹಿಂದೆ ಸರಿದ ಕಿಚ್ಚ ಸುದೀಪ್!

126

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಪರ ಮಾತ್ರ ಪ್ರಚಾರ ಮಾಡುವುದಾಗಿ ಹೇಳಿದ್ದ ನಟ ಕಿಚ್ಚ ಸುದೀಪ್, ನಂತರದ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿದರು. ದಿನಕ್ಕೆ ಐದಾರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದರು. ಆದರೆ, ಇದೀಗ ದಿಢೀರ್ ಎಂದು ಬಿಜೆಪಿ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದುವರೆಗೂ 18 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿರುವ ನಟ ಸುದೀ, ಇಂದು ರೋಣ ಸೇರಿ ಇತರೆ ಕಡೆ ಪ್ರಚಾರ ನಡೆಸಬೇಕಿತ್ತು. ಆದರೆ, ಸುದೀಪ್ ವಾಪಸ್ ಬೆಂಗಳೂರಿಗೆ ಹೋಗಿದ್ದಾರಂತೆ. ನಟ ಸುದೀಪ್ ಪ್ರಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಕೆ ಸುಧಾಕರ್ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು. ಆದರೆ, ವ್ಯವಸ್ಥೆ ಸರಿ ಮಾಡದ ಕಾರಣ ಮತಯಾಚನೆ ನಿಲ್ಲಿಸಿದ್ದಾರಂತೆ.

ರೋಡ್ ಶೋ ವೇಳೆ ಸರಿಯಾಗಿ ಸಿಗದ ವ್ಯವಸ್ಥೆ, ಭದ್ರತೆ, ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಬೇಕಾದ ವ್ಯವಸ್ಥೆ ಸೇರಿ ಹಲವು ಕಾರಣಗಳಿಂದ ನಟ ಸುದೀಪ್ ಬೇಸರಗೊಂಡ ನಿನ್ನೆಯೇ ಬೆಂಗಳೂರಿಗೆ ವಾಪಸ್ ಹೋಗಿದ್ದಾರಂತೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಾರೆ ಎಂದು ಹೇಳಿರುವ ಹೊತ್ತಿನಲ್ಲಿ ಇಷ್ಟೆಲ್ಲ ಬೆಳವಣಿಗೆ ನಡೆದಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.




Leave a Reply

Your email address will not be published. Required fields are marked *

error: Content is protected !!