ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಸಾವು

185

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವಿಚಾರಣಾಧೀನ ಕೈದಿ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಸಾವು ಸಂಭವಿಸಿದೆ.

ಜತ್ತ ತಾಲೂಕಿನ ಸೂಸಲಾದ ಗ್ರಾಮದ ಮಹಾದೇವ ಬಿರಾದಾರ (50) ಮೃತಪಟ್ಟ ಕೈದಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆದ ಕೌಟುಂಬಿಕ ಕಲಹದಲ್ಲಿ ಈತ ಆರೋಪಿಯಾಗಿದ್ದ.

ಕೇಂದ್ರ ಕಾರಾಗೃಹದಲ್ಲಿದ ಬ್ಯಾರಕ್‌ನಲ್ಲಿ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದ, ಜೈಲ್ ಸಿಬ್ಬಂದಿ ತಕ್ಷಣ ಕೈದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದ್ದರಿಂದ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕ ಐಜಿ ಮ್ಯಾಗೇರಿ ಮಾಹಿತಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!