ರೇವಣ್ಣನ ಪಿಎ ತೋಟದ ಮನೆಯಲ್ಲಿದ್ದ ಮಹಿಳೆ ರಕ್ಷಣೆ

76

ಪ್ರಜಾಸ್ತ್ರ ಸುದ್ದಿ

ಹುಣಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ರೇವಣ್ಣ ಪಿಎ ರಾಜಶೇಖರ್ ಎಂಬುವರ ತೋಟದ ಮನೆಯಲ್ಲಿದ್ದ ಮಹಿಳೆಯ ರಕ್ಷಣೆ ಮಾಡಲಾಗಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಮಹಿಳೆಯನ್ನು ರಕ್ಷಿಸಲಾಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಎ1 ಆರೋಪಿಯಾಗಿದ್ದು, ಲುಕ್ ಔಟ್ ನೋಟಿಸ್ ನೀಡಲಾಗಿದೆ. ಆದರೆ, 2ನೇ ಆರೋಪಿ ಸತೀಸ್ ಬಾಬುನನ್ನು ಶುಕ್ರವಾರ ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಅಲ್ಲಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಹಿಳೆಯ ಪುತ್ರ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 29ರಂದು ತಾಯಿ ಅಪಹರಣವಾಗಿದೆ ಎಂದು ರೇವಣ್ಣ ಹಾಗೂ ಸತೀಸ್ ಬಾಬು ವಿರುದ್ಧ ದೂರು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!