ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಘೋಷಣೆ ಮಾಡಲಾಗಿದೆ. ಅದರಂತೆ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ಘೋಷಣೆ ಮಾಡಬೇಕು ಅನ್ನೋ ಕೂಗು ಜೋರಾಗಿದೆ. ಕಿತ್ತೂರು ಕರ್ನಾಟಕ ಮರುನಾಮಕರಣದ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಅಂತಾ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕನ್ನಡಪರ ಸಂಘಟನೆಗಳಿಂದ ಒತ್ತಾಯ ಬಂದಿದೆ. ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಮೆರವಣಿಗೆ ಬಗ್ಗೆ ನಿರ್ಧಾರವಾಗಿಲ್ಲ. ಈ ಕುರಿತು ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಅಂತಾ ತಿಳಿಸಿದರು.