ಕಸಾಪ ವತಿಯಿಂದ ಚನ್ನಮ್ಮ ಜಯಂತ್ಯೋತ್ಸವ

227

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಿತ್ತೂರ ರಾಣಿ ಚನ್ನಮ್ಮ ಜಯಂತ್ಯೋತ್ಸವ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ಇತ್ತತೀಚೆಗೆ ಮಾಡಲಾಯಿತು.

ಈ ವೇಳೆ ಉಪನ್ಯಾಸ ನೀಡಿದ ಶಿಕ್ಷಕ ಎಂ.ಆರ್ ಡೋಣಿ, ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ವನಿತೆ ಕೇವಲ ಧೈರ್ಯ ಶೌರ್ಯಕ್ಕೆ ಹೆಸರಾಗಿರದೆ ಔದಾರ್ಯದ ಖನಿಯಾಗಿದ್ದಳು ಎಂದು ಹೇಳಿದರು.

ತಾಲೂಕ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ ಮಾತ್ನಾಡಿ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಹಾನ್ ಪುರುಷರ ಜಯಂತಿಗಳು ಕೇವಲ ಆಯಾ ಸಮುದಾಯಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ ಎಂದರು.

ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಲಿಂಗ ಚೌಧರಿ ಮಾತ್ನಾಡಿ, ಮಹಿಳೆಯರೂ ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಚನ್ನಮ್ಮ ಜಯಂತಿ ಅರ್ತಪೂರ್ಣವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಹಾಂತೇಶ ನೂಲಾನವರ, ಕಸಾಪ ಗೌರವ ಕಾರ್ಯದರ್ಶಿ ಬಸವರಾಜ ಅಗಸರ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಎಂ ಎಂ ಕೆಂಭಾವಿ, ಎಂ ಕೆ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಗುಂಡಣ್ಣ ಕುಂಬಾರ ಸ್ವಾಗತಿಸಿದರು. ಸಾಯಬಣ್ಣ ದೇವರಮನಿ ನಿರೂಪಿಸಿದರು. ಬಿ. ಎಂ ಮೋರೆ ವಂದಿಸಿದರು..




Leave a Reply

Your email address will not be published. Required fields are marked *

error: Content is protected !!