ಕೆಕೆಆರ್ ಕ್ಯಾಪ್ಟನ್ ಚೇಂಜ್: ಪಠಾಣ್, ಚೋಪ್ರಾ ಕಿಡಿ

360

ಪ್ರಜಾಸ್ತ್ರ ಕ್ರೀಡಾ ಸುದ್ದಿ

2020ನೇ ಸಾಲಿನ ಐಪಿಎಲ್ ಟಿ-20 ಟೂರ್ನಿಯಲ್ಲಿ ಕೆಕೆಆರ್ ಟೀಂ ಆಡಿರುವ 7 ಪಂದ್ಯಗಳಲ್ಲಿ 4ರಲ್ಲಿ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ದಿನೇಶ ಕಾರ್ತಿಕ ನಾಯಕತ್ವದಲ್ಲಿ ಚೆನ್ನಾಗಿ ಆಡ್ತಿರುವ ಹೊತ್ತಿನಲ್ಲೇ ದಿಢೀರ್ ನಾಯಕತ್ವ ಬದಲಾವಣೆ ಮಾಡಲಾಗಿದೆ.

ಟೂರ್ನಿಯ ಮಧ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿ, ಇಂಗ್ಲೆಂಡ್ ತಂಡದ ಕ್ಯಾಪ್ಟನ್ ಇಯಾನ್ ಮಾರ್ಗನ್ ಅವರಿಗೆ ಈ ಜವಾಬ್ದಾರಿ ವಹಿಸಲಾಗಿದೆ. ಕೀಪಿಂಗ್ ಹಾಗೂ ಬ್ಯಾಟಿಂಗ್ ಕಡೆ ಹೆಚ್ಚು ಗಮನ ಹರಿಸಲು ದಿನೇಶ ಕಾರ್ತಿಕ ಅವರೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕೆಕೆಆರ್ ತನ್ನ ಅಧಿಕೃತ ಟ್ವೀಟ್ ನಲ್ಲಿ ಹೇಳಿದೆ. ಆದ್ರೆ, ಇದಕ್ಕೆ ಕ್ರಿಕೆಟ್ ಪಂಡಿತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂಡಿಯನ್ ಟೀಂ ಮಾಜಿ ಬೌಲರ್ ಇರ್ಫಾನ್ ಪಠಾಣ್, ಆಕಾಶ ಚೋಪ್ರಾ ಸೇರಿದಂತೆ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಟೂರ್ನಿಯ ಮಧ್ಯದಲ್ಲಿ ನಾಯಕತ್ವ ಬದಲಾವಣೆ ಮಾಡಿದ್ದು ಒಬ್ಬ ವ್ಯಕ್ತಿಗೆ ಹಾಗೂ ತಂಡಕ್ಕೆ ಒಳ್ಳೆಯದಲ್ಲವೆಂದು ಕಿಡಿ ಕಾರಿದ್ದಾರೆ. ಇಂದಿನ ಮುಂಬೈ ವಿರುದ್ಧದ ಪಂದ್ಯದಲ್ಲಿ 4 ರನ್ ಗೆ ಕಾರ್ತಿಕ ಔಟ್ ಆಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!