ಪ್ರಜಾಸ್ತ್ರ ಸುದ್ದಿ
ಕೋಲಾರ: ಜನರ ಶಾಂತಿ ನೆಮ್ಮದಿಗಾಗಿ ಕೊಡಗಿನಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಕೊಡಗು ಚಲೋ ಬಗ್ಗೆ ನನಗೆ ಯಾವುದೇ ಭಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಎರಡು ಪಕ್ಷಗಳ ಜಗಳದಿಂದ ಜನರ ನೆಮ್ಮದಿ ಕೆಡಬಾರದು. ಕೊಡಗು ಚಲೋ ಮಾಡಲು ಆಗುವುದಿಲ್ಲ. ಯಾವುದೇ ಪಕ್ಷದವರು ಪ್ರತಿಭಟನೆ ಮಾಡಲು ಅವಕಾಶವಿಲ್ಲ ಎಂದಿದ್ದಾರೆ. ಇನ್ನು ಗಣೇಶ ಹಬ್ಬದಲ್ಲಿಯೂ ಯಾವುದೇ ಅಶಾಂತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.