ಕೊಳದ ಮಠದ ಶ್ರೀ ಲಿಂಗೈಕ್ಯ

471

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ(80) ಶನಿವಾರ ನಿಧನರಾಗಿದ್ದಾರೆ. ನಿನ್ನೆಯವರೆಗೂ ಆರೋಗ್ಯವಾಗಿದ್ದರು. ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಇಂದು ಹೃದಾಯಾಘತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಠದಲ್ಲಿಯೇ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮಠದ ಸಿಬ್ಬಂದಿ ತಿಳಿಸಿದ್ದಾರೆ. ಸ್ವಾಮೀಜಿಗಳ ನಿಧನಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು, ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ ಸೇರಿ ಹಲವು ಸ್ವಾಮೀಜಿಗಳು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!