ಪ್ರಜಾಸ್ತ್ರ ಸುದ್ದಿ
ಕೋಲಾರ: ಶ್ರೀನಿವಾಸಪುರ-ಚಿಂತಾಮಣಿ ಮುಖ್ಯರಸ್ತೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಪಾತಪಲ್ಲಿ ಗ್ರಾಮದ 50 ವರ್ಷದ ರಾಜಣ್ಣ ಮೃತ ದುರ್ದೈವಿ.
ಕಾರು ಅತಿವೇಗವಾಗಿ ಬಂದಿದ್ದೇ ಈ ಅಪಘಾತಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತದೇಹವನ್ನು ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.