ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಉಡುಪಿಯ ಕೋಟ ತಟ್ಟುವಿನಲ್ಲಿ ಕೊರಗ ಸಮುದಾಯದ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಪಿಎಸ್ಐ ಅಮಾನತುಗೊಂಡು ಐವರು ಸಿಬ್ಬಂದಿ ವರ್ಗಾವಣೆಯಾಗಿದೆ. ಆದರೆ, ಪೊಲೀಸರು ಅವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್.ಸಿ ಮಾಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಕೊರಗ ಸಮುದಾಯದ ಮೇಲೆ ಪೊಲೀಸರು ದೌರ್ಜನ್ಯವೆಸಗಿರುವುದು ಅಮಾನವೀಯ ಘಟನೆ. ತಕ್ಷಣ ಪ್ರಕರಣ ವಾಪಸ್ ಪಡೆದು ಘಟನೆಗೆ ಕಾರಣರಾದ ಪೊಲೀಸರ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಗಳೆಲ್ಲರೂ ಒಂದು ಅನ್ನೋ ಬಿಜೆಪಿ ಬ್ರಾಂಡಿನ ಹಿಂದು ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪೃಶ್ಯರನ್ನಾಗಿಯೇ ಉಳಿಸುವ ಗೌಪ್ಯ ಅಜಂಡಾನಾ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಮಾಜಿ ಸಚಿವ ಎಚ್.ಸಿ ಮಹಾದೇವಪ್ಪ ಮಾತನಾಡಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ, ಪೊಲೀಸರು ಕೊರಗ ಸಮಾಜದವರ ಮೇಲೆ ಜಾಮೀನು ರಹಿತ ಕೇಸ್ ದಾಖಲಿಸಿದ್ದಾರೆ. ಇದು ಮೇಲ್ನೋಟಕ್ಕೆ ಸುಳ್ಳು ಎಂದು ಕಾಣಿಸುತ್ತೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂದಿದ್ದರೆ ಅಂದೆ ಏಕ ತಿಳಿಸಲಿಲ್ಲ. ಈ ಕೇಸ್ ಕೊರಗರ ಮೇಲಿನ ಸರ್ಕಾರಿ ಪ್ರಾಯೋಜಿತ ದಾಳಿ ಎಂಬುವುದು ಸ್ಪಷ್ಟವಾಗಿದೆ. ಇದು ಮತ್ತೊಂದು ಜೈ ಭೀಮ್ ಆಗದಿರಲಿ ಎಂದು ತೆಲುಗಿನ ಸೂಪರ್ ಹಿಟ್ ಚಿತ್ರ ಜೈ ಭೀಮ್ ಸಿನಿಮಾದ ಕಥೆ ನೆನಪಿಸಿದ್ದಾರೆ.