ಕೋಟಿಗೊಬ್ಬ-3 ಬಿಡುಗಡೆ ಸಮಸ್ಯೆ.. ನಿರ್ಮಾಪಕರು ಹೇಳಿದ್ದೇನು?

227

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರ ಇಂದು ರಿಲೀಸ್ ಆಗಬೇಕಿತ್ತು. ಆದ್ರೆ, ಕೆಲ ಸಮಸ್ಯೆಯಿಂದಾಗಿ ಚಿತ್ರ ಬಿಡುಗಡೆಯಾಗಿಲ್ಲ. ಇದರಿಂದಾಗಿ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ನಿರ್ಮಾಪಕರ ವಿರುದ್ಧ ಕಿಡಿ ಕಾರುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಸೂರಪ್ಪ ಬಾಬು, ಇಂದು ಸಿನಿಮಾ ರಿಲೀಸ್ ಮಾಡಲು ಆಗುತ್ತಿಲ್ಲ. ಚಿತ್ರ ಇಂದು ಬಿಡುಗಡೆಯಾಗದಂತೆ ಷಡ್ಯಂತ್ರ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಲ ವಿತರಕರು ಮಾಡಿದ ಮೋಸದಿಂದ ಸಿನಿಮಾ ರಿಲೀಸ್ ಆಗುತ್ತಿಲ್ಲ. ಸುದೀಪ್ ಸರ್ ಗೂ ಸತ್ಯ ಗೊತ್ತಾಗಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!