ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕಳೆಗೆ ಇಳಿದು ಹೊಸಬರಿಗೆ ಅವಕಾಶ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವೆ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಹಳಬರು ಎರಡೂವರೆ ವರ್ಷಕ್ಕೆ ಸಚಿವ ಸ್ಥಾನ ಬಿಟ್ಟು ಕೊಡುವ ಮೂಲಕ ಹೊಸಬರಿಗೆ ಅವಕಾಶ ನೀಡಬೇಕು. ಇದರಿಂದಾಗಿ ದೇಶದಲ್ಲಿ ನಾವು ಹೊಸ ಪರಂಪರೆ ಸೃಷ್ಟಿದಂತಾಗುತ್ತೆ. ಇದು ನನ್ನ ವೈಯಕ್ತಿಕ ಸಲಹೆ ಎಂದಿದ್ದಾರೆ.
ಇನ್ನು ಪಕ್ಷ ಮತ್ತು ಸರ್ಕಾರಕ್ಕೆ ಸಂಬಂಧಿಸಿದಂತೆ ಏನಾದರೂ ಭಿನ್ನಾಭಿಪ್ರಾಯಗಳು ಇದ್ದರೆ, ಅದನ್ನು ಬಹಿರಂಗವಾಗಿ ಚರ್ಚಿಸದೆ ಆಂತರಿಕವಾಗಿ ಚರ್ಚಿಸಬೇಕು. ಬಹಿರಂಗ ಹೇಳಿಕೆಗೆ ಅವಕಾಶ ನೀಡಬಾರದು ಅನ್ನೋ ಮಾತುಗಳು ಹಿರಿಯರಿಂದ ಕೇಳಿ ಬಂದಿವೆ.