ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಮನೋಹರ್ ರಾಜೀನಾಮೆ

108

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚುನಾವಣೆಯ ಸಮಯದಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತವೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರು, ವಿವಿಧ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವುದು ನಡೆಯುತ್ತೆ. ಇದೆ ರೀತಿ ಇದೀಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಸ್.ಮನೋಹರ್ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಪಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನೋ ಸುದ್ದಿ ಜೋರಿದೆ. ಅವರು ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಸೇರುತ್ತಾರೆ ಅನ್ನೋ ಚರ್ಚೆ ಮಾತ್ರ ನಡೆಯುತ್ತಿದೆ. ಹೀಗಾಗಿ ರಾಜಾಜಿನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದ ಎಸ್.ಮನೋಹರ್, ವಿ.ಸೋಮಣ್ಣ ಕಾಂಗ್ರೆಸ್ ಸೇರಿ ಇಲ್ಲಿಂದಲೇ ಸ್ಪರ್ಧಿಸುವ ವಿಚಾರ ತಿಳಿದು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ವಸತಿ ಸಚಿವ ವಿ.ಸೋಮಣ್ಣ ಕಳೆದ ಕೆಲ ದಿನಗಳಿಂದ ಬಿಜೆಪಿ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದಾರೆ. ಯಾವುದ್ಯಾವುದೋ ನೆಪ ಹೇಳಿ ಯಾತ್ರೆಗಳಿಂದ ಅರ್ಧಕ್ಕೆ ವಾಪಸ್ ಹೋಗುತ್ತಿದ್ದಾರೆ. ಇನ್ನು ಈ ಬಾರಿ 4 ರಿಂದ 6 ಹಾಲಿ ಶಾಸಕರಿಗೆ ಟಿಕೆಟ್ ನೀಡಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿರುವ ಮಾತು ಸೇರಿ ಸಾಕಷ್ಟು ವದಂತಿ ಹಬ್ಬಿದೆ. ಶೀಘ್ರದಲ್ಲಿ ಇದಕ್ಕೆ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!