ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ ಇಂದು ಮೊದಲ ಸಭೆ ನಡೆಸ್ತಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಮೊದಲ ಬಾರಿಗೆ ನೂತನ ಅಧ್ಯಕ್ಷರು ಸಭೆ ನಡೆಸ್ತಿದ್ದು, ಪಕ್ಷವನ್ನ ಇನ್ನಷ್ಟು ಬಲಗೊಳಿಸುವುದು ಹಾಗೂ ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆಯಲಿವೆ.
ಬೆಳಗ್ಗೆ 11.30ಕ್ಕೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆದಿದ್ದು, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ ಸೇರಿದಂತೆ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ನೂತನ ಅಧ್ಯಕ್ಷರ ಮೊದಲ ಸಭೆಯಲ್ಲಿ ಏನೆಲ್ಲ ಚರ್ಚೆಯಾಗಬಹುದು, ಯಾರೆಲ್ಲ ಭಾಗವಹಿಸಬಹುದು ಅನ್ನೋ ಕುತೂಹಲವಿದೆ.