ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿದ್ದಾಗ ರಾಜನಂತೆ ಇದ್ದವರು, ಇಂದು ಬಿಜೆಪಿ ಮುಂದೆ ಭಿಕ್ಷುಕರಾಗಿದ್ದಾರೆ ಎಂದು ಅನರ್ಹ ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತ್ನಾಡಿದ ಅವರು, ಅನರ್ಹರಿಗೆ ಈ ಹಿಂದೆ ಎರಡ್ಮೂರು ಬಾರಿ ಎಚ್ಚರಿಕೆ ನೀಡಿದ್ದೆ. ಬಿಜೆಪಿ ಅವರನ್ನ ನಂಬಬೇಡಿ ಎಂದು. ಕಾಂಗ್ರೆಸ್ ನಲ್ಲಿ ರಾಜನಂತೆ ಇದ್ದರು. ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿಗೆ ಬೆಂಬಲ ಸೂಚಿಸಿದ್ರು. ಇದೀಗ ಅವರೆ ಬಿಜೆಪಿ ಮುಂದೆ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ರು.