ನನ್ನ ಉತ್ಸವ ಬೇಡ, ಕಾಂಗ್ರೆಸ್ ಉತ್ಸವ ಮಾಡಿ: ಡಿಕೆಶಿ

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನನಗೆ ಯಾವ ಉತ್ಸವ ಬೇಡ. ಅಭಿಮಾನದಿಂದ ಏನು ಮಾಡುತ್ತಾರೋ ಅದು ಬೇಡ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲಿ ಜಾಹೀರಾತು ನೀಡುತ್ತೇವೆ ಎಂದರು. ಬೇಡ ಎಂದೆ. ಹೀಗಾಗಿ ಕಾಂಗ್ರೆಸ್ ಉತ್ಸವ ಮಾಡಿ, ದೇಶದ ಉತ್ಸವ ಮಾಡಿ ಎಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ದಿನವೇ ಹೇಳಿದ್ದೇನೆ. ವ್ಯಕ್ತಿ ಪೂಜೆ ಬೇಡ. ಪಕ್ಷ ಪೂಜೆ ಮಾಡಿ ಎಂದು. ಈಗಲೂ ಅದಕ್ಕೆ ಬದ್ಧನಾಗಿದ್ದಾನೆ. ಅಭಿಮಾನಿಗಳು ಅವರ ಅಭಿಪ್ರಾಯ ಹೇಳಿದ್ದಾರೆ. ಅದಕ್ಕೂ ನನಗೂ ಸಂಬಂಧವಿಲ್ಲ. ಈ ವಿಚಾರ ವಿರೋಧ ಪಕ್ಷಗಳಿಗೆ ಆಹಾರ ಆಗಬಾರದೆಂದು ಹೇಳಿದ್ದೇನೆ ಎಂದರು.

ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಹೋಗುತ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಸಭೆಗೆ ಹೋಗುವುದಿಲ್ಲ. ಕಾರ್ಯಕ್ರಮಕ್ಕೆ ಅತಿಥಿಯಾಗಿ ರಾಹುಲ್ ಗಾಂಧಿ, ನನ್ನನ್ನು ಆಹ್ವಾನಿಸಿದ್ದಾರೆ. ಭಾಗವಹಿಸುತ್ತೇನೆ ಎಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!