ಪ್ರಜಾಸ್ತ್ರ ಸುದ್ದಿ
ಮೈಸೂರು: 40 ಪರ್ಸೆಂಟ್ ಸರ್ಕಾರ 40 ಸೀಟಿಗೆ ಸಿಮೀತವಾಗುತ್ತೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಬಾರಿ ಕಾಂಗ್ರೆಸ್ 150 ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೆ. ಮೇ 13ಕ್ಕೆ ಬಿಜೆಪಿ ಶವಯಾತ್ರೆ ನಡೆಯುತ್ತೆ ಎಂದು ಕೆಪಸಿಸಿ ಅಧ್ಯಕ್ಷ, ಕನಕಪುರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಜನರಿಗೆ ಚಾಕಲೇಟ್ ಕೊಟ್ಟು ಬಿಜೆಪಿ ಸರ್ಕಾರ ಮೋಸ ಮಾಡಿದೆ. ಬರೀ ಸುಳ್ಳು ಹೇಳಿ ಕಾಲ ಕಳೆಯುತ್ತಿದೆ. ರಾಜ್ಯದ ಜನರು ದಡ್ಡರಲ್ಲ. ಡಬಲ್ ಇಂಜಿನ್ ಸರ್ಕಾರ ಕೆಟ್ಟು ಹೋಗಿದೆ. ಇದರ ಆಯುಸ್ಸು ಇನ್ನು 13 ದಿನ ಮಾತ್ರ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಮಾತನಾಡಿ, ಮೀಸಲಾತಿ ವಿಚಾರದಲ್ಲಿ ರಾಜಕೀಯ ಲಾಭ ಪಡೆಯಲು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ಸಮೀಕ್ಷೆ ನಡೆಸಲಾಗುವುದು. ಇನ್ನು ಚಾಮರಾಜನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆಯುವ ಬಗ್ಗೆ ಸಚಿವ ವಿ.ಸೋಮಣ್ಣ ಜೊತೆಗೆ ನಡೆಸಿರುವ ಮಾತುಕತೆಯ ಆಡಿಯೋ ವಿಚಾರದ ಬಗ್ಗೆ ಸಂಜೆ ಸಭೆ ನಡೆಸಲಾಗುವುದು ಎಂದರು.