ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಆಯ್ಕೆ ಫಿಕ್ಸ್ ಎನ್ನಲಾಗ್ತಿದೆ. ಈ ಕುರಿತು ಹೈಕಮಾಂಡ್ ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಡಿಕೆಶಿ ಹೆಸರನ್ನ ಫೈನಲ್ ಮಾಡಿದ್ದು ನಾಳೆ ಅಧಿಕೃತ ಘೋಷಣೆ ಎನ್ನಲಾಗ್ತಿದೆ.
ರಾಜ್ಯದಲ್ಲಿ ನಡೆದ ಉಪ ಚುನಾವಣೆ ಸೋಲಿನ ಬಳಿಕ ದಿನೇಶ ಗುಂಡೂರಾವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಸಿಎಲ್ ಪಿ ಹಾಗೂ ವಿರೋಧ ಪಕ್ಷದ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿಗ್ ಫೈಟ್ ನಡೆದಿದೆ. ಸಿದ್ದು ಮಾಜಿ ಸಚಿವ ಎಂ.ಬಿ ಪಾಟೀಲ ಪರ ಬ್ಯಾಟ್ ಬೀಸಿದ್ರು. ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರಿಗೆ ಮುಂದುವರೆಯಿರಿ ಎಂದು ಹೇಳಲಾಗಿದೆ ಅಂತಾ ಹೇಳಲಾಗ್ತಿದೆ. ಎಲ್ಲದಕ್ಕೂ ನಾಳೆ ತೆರೆ ಬೀಳಲಿದೆ.