ಮೈಸೂರು: ಕೆಪಿಸಿಸಿ ಅಧ್ಯಕ್ಷ ಹಗೂ ಕಾರ್ಯಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ದಿನೇಶ ಗುಂಡೂರಾವ ಮಾತ್ನಾಡಿದ್ದು, ಯಾರು ಬಹಿರಂಗವಾಗಿ ಹೇಳಿಕೆಗಳನ್ನ ನೀಡ್ಬೇಡಿ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಸುತ್ತೂರಿನಲ್ಲಿ ಮಾತ್ನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ, ಪಕ್ಷದ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ನೇಮಕ ವಿಚಾರ ಪಕ್ಷದ ಆಂತರಿಕ ವಿಷಯವಾಗಿದೆ. ಈ ಬಗ್ಗೆ ಯಾರೂ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಸೂಚಿಸಿದ್ದಾರೆ. ಕಾರ್ಯಧ್ಯಕ್ಷರ ಹುದ್ದೆ ನೇಮಕದಿಂದ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ. ಇಲ್ಲಿ ಒಬ್ಬರನ್ನ ನೇಮಿಸಬೇಕಾ.. ಪ್ರತ್ಯೇಕವಾಗಿ ಹುದ್ದೆಯನ್ನ ನೀಡಬೇಕಾ ಅನ್ನೋದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಅಂತಾ ದಿನೇಶ ಗುಂಡೂರಾವ ಹೇಳಿದ್ದಾರೆ.