ಬೆಂಗಳೂರು: ಕೆಪಿಎಲ್ ಆಟಗಾರರ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಸ್ಫೋಟಕ ಮಾಹಿತಿ ಹೊರ ಹಾಕಿದ್ದಾರೆ. ಫಿಕ್ಸಿಂಗ್ ಹಿಂದೆ ಹನಿಟ್ರ್ಯಾಪ್ ಕೈವಾಡವಿದೆ ಎಂದು ಪೊಲೀಸ್ ಆಯುಕ್ತರಾದ ಭಾಸ್ಕರ ರಾವ್ ಹೇಳಿದ್ದಾರೆ.
ಆಟಗಾರರನ್ನು ಹನಿಟ್ರ್ಯಾಪ್ ಗೆ ಬೀಳಿಸಲಾಗಿದೆ. ಬಳಿಕ ಅವರ ಕೈಯಿಂದ ಬಲವಂತವಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿಸಲಾಗಿದೆ. ಈ ಸಂಬಂಧ ಕೆಪಿಎಲ್ ನ 7 ಜನ ಆಟಗಾರರನ್ನ ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ವಿಚಾರಣೆ ವೇಳೆ ಆಟಗಾರರು ಹನಿಟ್ರ್ಯಾಪ್ ನಿಂದಾಗಿ ಒಪ್ಪಿಕೊಳ್ಳಬೇಕಾಯ್ತು ಎಂದು ಮಾಹಿತಿ ನೀಡಿದ್ದಾರೆ ಅಂತಾ ತಿಳಿಸಿದ್ರು.
ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ದೊಡ್ಡದಾಗಿ ಬೆಳದಿದೆ. ಹೀಗಾಗಿ ಆಟಗಾರರನ್ನು ಹನಿಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿ ಮ್ಯಾಚ್ ಫಿಕ್ಸಿಂಗ್ ಗೆ ಕರೆದುಕೊಂಡು ಬರಲಾಗ್ತಿದೆ. ಕೆಎಸ್ ಸಿಎ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.