ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಜನವರಿ 24ರಂದು ರಾಜ್ಯಾದ್ಯಂತ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಮುಂದೂಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನ ಮುಂದೂಡಲಾಗಿದೆ.
ಜನವರಿ 24ರಂದು ಎರಡೂ ಹಂತಗಳಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಕೆಲವೊಂದು ದುಷ್ಕರ್ಮಿಗಳ ಕೈಸೇರಲಾಗಿದೆ ಅನ್ನೋದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನ ಮರುನಿಗದಿ ಪಡಿಸಿ ತಿಳಿಸಲಾಗುವುದು ಎಂದು ಕೆಪಿಎಸ್ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕರಣೆಯಲ್ಲಿ ತಿಳಿಸಿದ್ದಾರೆ.