ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಧಾರವಾಹಿಯ ಕಂತುಗಳಂತೆ ನಿತ್ಯ ಒಂದೊಂದಾಗಿ ಹೊರಬರುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪಿಎಸ್ಐ ಹಗರಣದ ತನಿಖೆಯೇ ಮುಗಿದಿಲ್ಲ. ಅಷ್ಟರಲ್ಲೇ ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದು, ಕೋಟ್ಯಾಂತರ ರೂಪಾಯಿ ಅವ್ಯವಹಾರವಾಗಿರುವುದು ಬೆಳಕಿಗೆ ಬಂದಿದೆ ಎಂದು ಬರೆದು ಹ್ಯಾಶ್ ಟ್ಯಾಗ್ ಭ್ರಷ್ಟ ಬಿಜೆಪಿ ಅಂತಾ ಕಿಡಿ ಕಾರಿದ್ದಾರೆ.