ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡಿರುವ ಜನಾರ್ಧನ್ ರೆಡ್ಡಿ, ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದ್ದಾರೆ. ಗಂಗಾವತಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ, ನಾಗಠಾಣ, ಸಿರಗುಪ್ಪ, ಕನಕಗಿರಿ, ಸಿಂಧನೂರು ಹಾಗೂ ಹಿರಿಯೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ವಿಜಯಪುರ ಜಿಲ್ಲೆಯ ನಾಗಠಾಣ ಎಸ್ಸಿ ಮೀಸಲು ಕ್ಷೇತ್ರಕ್ಕೆ ಶ್ರೀಕಾಂತ್, ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್ಸಿ ಮೀಸಲು ಕ್ಷೇತ್ರಕ್ಕೆ ಡಾ.ಚಾರುಲ್ ದಾಸರಿ, ಬಳ್ಳಾರಿಯ ಸಿರಗುಪ್ಪಕ್ಕೆ ಧರೆಪ್ಪ ನಾಯಕ, ಚಿತ್ರದುರ್ಗದ ಹಿರಿಯೂರು ಕ್ಷೇತ್ರಕ್ಕೆ ಮಹೇಶ್ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರಕ್ಕೆ ನೆಕ್ಕಂಟಿ ಮಲ್ಲಿಕಾರ್ಜುನ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಈ ಕುರಿತು ಸರ್ವೇ ಮಾಡಿಸಿದ್ದೇವೆ. ಇವರು ಗೆಲ್ಲುತ್ತಾರೆ ಅನ್ನೋ ಮಾಹಿತಿ ಆಧರಿಸಿ ಟಿಕೆಟ್ ಘೋಷಿಸಲಾಗಿದೆ. ಈ ಐದು ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಕೆಆರ್ ಪಿ ಪಕ್ಷದ ಸಂಸ್ಥಾಪಕ ಜರ್ನಾಧನ್ ರೆಡ್ಡಿ ಹೇಳಿದರು.