ಕಾವೇರಿಗೆ 5 ಬಾರಿ ಬಾಗಿನ ಅರ್ಪಿಸಿದ ಮೊದಲ ಸಿಎಂ

251

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಾಗಿನಿ ಅರ್ಪಿಸಿದ್ರು. ಮಂಡ್ಯ ಜಿಲ್ಲೆಯ ಕೆಆರ್ ಎಸ್ ಹಾಗೂ ಕಬಿನಿ ಜಲಾಶಯ ತುಂಬಿದ ಮೇಲೆ ಬಾಗಿನ ಅರ್ಪಿಸುವುದು ಮೊದಲಿನಿಂದ ಬಂದ ಸಂಪ್ರದಾಯವಾಗಿದೆ.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶಗೌಡ, ಪುಟ್ಟರಾಜು, ಸಂಸದ ಪ್ರತಾಪ ಸಿಂಹ, ಎಂಎಲ್ ಸಿ ಹೆಚ್ ವಿಶ್ವನಾಥ ಸೇರಿದಂತೆ ಸ್ಥಳೀಯ ರಾಜಕೀಯ ಮುಖಂಡರು ಭಾಗವಹಿಸಿದ್ರು. ಸಿಎಂ ಆಗಿ ಐದು ಬಾರಿ ಕಾವೇರಿಗೆ ಬಾಗಿನ ಅರ್ಪಿಸಿದ ಮೊದಲಿಗರು ಬಿಎಸ್ವೈ. ಆರ್.ಗುಂಡೂರಾವ, ಎಸ್.ಬಂಗಾರಪ್ಪ, ಹೆಚ್.ಡಿ ಕುಮಾರಸ್ವಾಮಿ ಮೂರು ಬಾರಿ ಬಾಗಿನಿ ಅರ್ಪಿಸಿದ್ದಾರೆ.

ಪ್ರಸ್ತುತ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 124.25 ಅಡಿ ಇದೆ. 16.778 ಕ್ಯೂಸೆಕ್ ಒಳಹರಿವು, 5.37 ಕ್ಯೂಸೆಕ್ ನೀರನ್ನ ಹೊರ ಬಿಡಲಾಗ್ತಿದೆ. ಜಲಾಶಯದಲ್ಲಿ 48.684 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.




Leave a Reply

Your email address will not be published. Required fields are marked *

error: Content is protected !!