ಪ್ರಜಾಸ್ತ್ರ ಸುದ್ದಿ
ಧಾರವಾಡ: ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ಕರ್ನಾಟಕ ರಾಷ್ಟ್ರ ಸಮಿತಿ ಭರ್ಜರಿ ಪ್ರಚಾರ ನಡೆಸಿದೆ. ಬುಧವಾರ ಮುಂಜಾನೆ ನಗರದ ಜುಬಲಿ ಸರ್ಕಲ್ ಹತ್ತಿರ ಮುಖಂಡರು ಮಾತನಾಡಿದರು.
ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಮುಖ್ಯಮಂತ್ರಿ ಅಭ್ಯರ್ಥಿ ರವಿಕೃಷ್ಣ ರೆಡ್ಡಿ ಸೇರಿದಂತೆ ವಿವಿಧ ಮತಕ್ಷೇತ್ರಗಳ ಅಭ್ಯರ್ಥಿಗಳು ಪಕ್ಷದ ಪರ ಪ್ರಚಾರ ನಡೆಸಿದ್ದು, ಭ್ರಷ್ಟಾಚಾರ ಮುಕ್ತ, ಸ್ವಚ್ಛ ಕರ್ನಾಟಕ ನಿರ್ಮಾಣ ಸೇರಿ ಸಮಗ್ರ ಕರ್ನಾಟಕ ಅಭಿವೃದ್ಧಿ ನೀಲ ನಕ್ಷೆ ಕುರಿತು ಜನರಿಗೆ ತಿಳಿಸುವ ಮೂಲಕ ಕೆಆರ್ ಎಸ್ ಗೆ ಬೆಂಬಲಿಸಿ ಎನ್ನುತ್ತಿದ್ದಾರೆ. ಜೊತೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಪಕ್ಷ ಸಂಘಟನೆ ನಡೆಸಲಾಗುತ್ತಿದೆ.