ಪ್ರಜಾಸ್ತ್ರ ಸುದ್ದಿ
ನವದೆಹಲಿ: ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಜೋರಾಗ್ತಿದೆ. ಈ ಬಗ್ಗೆ ಮಾತ್ನಾಡಿರುವ ಪ್ರಧಾನಿ ಮೋದಿ, ರೈತರ ಹಾದಿ ತಪ್ಪಿಸಲಾಗ್ತಿದೆ. ಕೃಷಿ ಮಸೂದೆ ಬಗ್ಗೆ ಗೊಂದಲ ಸೃಷ್ಟಿಸಿ, ಸುಳ್ಳು ಆರೋಪ ಮಾಡಲಾಗ್ತಿದೆ. ಅವುಗಳಿಗೆ ಅಂತ್ಯ ಹಾಡಬೇಕಿದೆ ಎಂದರು.
ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ ಸ್ಥಾಪನೆ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತ್ನಾಡಿದ್ರು. ಹಿಂದಿನ ಸರ್ಕಾರ ತಂದಿರುವ ಕಾನೂನು, ಭರವಸೆಗಳು ಸಾಕಷ್ಟು ಜಟಿಲವಾಗಿದ್ವು. ಇದು ರೈತರಿಗೆ ಅರ್ಥವಾಗ್ತಿರಲಿಲ್ಲ. ಆದ್ರಿಂದ ರೈತರ ಕಲ್ಯಾಣಕ್ಕಾಗಿ ಸುಧಾರಣೆಗಳನ್ನು ತರುತ್ತಿದೆ ಎಂದರು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಮೂಲಕ 10 ಕೋಟಿಗೂ ಹೆಚ್ಚು ರೈತರಿಗೆ 1 ಲಕ್ಷ ಕೋಟಿ ರೂಪಾಯಿ ನೀಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ಮೂಲಕ ರೈತರಿಗೆ ಸುಲಭವಾಗಿ ಸಾಲ ಸಿಗುವಂತೆ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು ಕೃಷಿ ಮಸೂದೆ ಬಗ್ಗೆ ರೈತರಿಗೆ ತಿಳುವಳಿಕೆ ನೀಡುವ ಮೂಲಕ ಸೃಷ್ಟಿಯಾಗ್ತಿರುವ ಗೊಂದಲವನ್ನ ಮೆಟ್ಟಿ ನಿಲ್ಲಬೇಕು ಎಂದು ಹೇಳಿದ್ರು.