ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ನಾಳೆ ಪ್ರತಿಭಟನೆ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೆಹಲಿ ಕೆಂಪು ಕೋಟೆಯ ಮೇಲೆ ಕೇಸರಿ ಹಾರಾಟದ ಹೇಳಿಕೆ ನೀಡಿರುವ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಈಗಾಗ್ಲೇ ಪ್ರತಿಭಟನೆ ನಡೆಸಿದೆ. ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ಸಹ ನಡೆಸಿದೆ. ಇನ್ನು ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.

ಸಚಿವ ಈಶ್ವರಪ್ಪರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ಅವರ ವಿರುದ್ಧ ತನಿಖೆಯಾಗಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆಸಿದೆ. ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ನಾಳೆ ಪ್ರತಿಭಟನೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆ ನೀಡಿದ್ದಾರೆ. ಈ ಮೂಲಕ ಈಶ್ವರಪ್ಪ ವಿರುದ್ಧ ಮತ್ತಷ್ಟು ಆಕ್ರೋಶ ಬುಗಿಲೇಳಲಿದೆ.




Leave a Reply

Your email address will not be published. Required fields are marked *

error: Content is protected !!