ಪ್ರಜಾಸ್ತ್ರ ಸುದ್ದಿ
ಜಮಖಂಡಿ: ಮನೆಯೊಂದರಲ್ಲಿ ಅಕ್ರಮವಾಗಿ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪೌಡರ್ ಪ್ಯಾಕೇಟ್ ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಕ್ಷರ ದಾಸೋಹ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ರು.
ನಗರದ ಮೋಮಿನ ಗಲ್ಲಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1 ಕೆಜಿ ಹಾಗೂ ಅರ್ಧ ಕೆಜಿ ತೂಕದ ಹಾಲಿನ ಪೌಡರ್ ಪ್ಯಾಕೇಟ್ ಮೂಟೆಗಳು ಪತ್ತೆಯಾಗಿವೆ. ಈ ಬಗ್ಗೆ ಪರಿಶೀಲಿಸಿ ತನಿಖೆ ಕೈಗೊಂಡು ಪ್ರಕರಣ ದಾಖಲಿಸಲಾಗುವುದಾಗಿ ತಿಳಿಸಿದ್ದಾರೆ. ಅಕ್ಷರ ದಾಸೋಹ ಅಧಿಕಾರಿ ಬಸವರಾಜ ಐನಾಪೂರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಸಿಡಿಪಿಓ ಆನಂದ, ಜಂಬಗಿ, ಪೊಲೀಸ ಸಿಬ್ಬಂದಿ ಇದ್ದರು.