ಸಾರಿಗೆ ಮುಷ್ಕರ ವಾಪಸ್

252

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರವನ್ನ ವಾಪಸ್ ಪಡೆಯಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ತಾತ್ಕಾಲಿಕವಾಗಿ ಮುಷ್ಕರ ವಾಪಸ್ ಪಡೆಯಲಾಗಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ಆರನೇ ವೇತನ ಆಯೋಗ ಜಾರಿಗೆ ನಮ್ಮ ಬೇಡಿಕೆ ಇದೆ. ಇದರಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ. ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕೋವಿಡ್ ಸಂಕಷ್ಟದ ನಡುವೆ ಮುಷ್ಕರ ಬೇಡ ಎಂದಿತ್ತು. ಕೋರ್ಟ್ ಸೂಚನೆಗೆ ಗೌರವ ಕೊಟ್ಟು ಮುಷ್ಕರ‌ ವಾಪಸ್ ಪಡೆಯುವುದಾಗಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!