ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರು 6ನೇ ವೇತನ ಆಯೋಗದಂತೆ ವೇತನ ನೀಡಬೇಕೆಂದು ಬುಧವಾರದಿಂದ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಬಸ್ ಸಂಚಾರ ಸ್ತಬ್ಧವಾಗಿದೆ. ಕೆಎಸ್ಆರ್ ಟಿಸಿ, ಬಿಎಂಟಿಸಿ, ಎನ್ ಕೆಎಸ್ಆರ್ ಟಿಸಿ, ಎನ್ ಡಬ್ಲುಟಿಸಿ ಸೇರಿದಂತೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದಿಂದ ಖಾಸಗಿ ಬಸ್ ಗಳು, ಆಟೋಗಳು ಭರ್ಜರಿಯಾಗಿ ಹಣ ಕೇಳುತ್ತಿದ್ದಾರೆ. ಇದ್ರಿಂದಾಗಿ ಪ್ರಯಾಣಿಕರು ತಮ್ಮ ನಿಗದಿತ ಸ್ಥಳಕ್ಕೆ ಹೋಗಲು ಆಗ್ತಿಲ್ಲ. ಆಟೋಗಳನ್ನ ಕೇಳಿದ್ರೆ 200, 250 ರೂಪಾಯಿ ಕೇಳ್ತಿದ್ದು ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.