ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ತೆರವುಗೊಳಿಸಿದ ನಂತರ ಬಸ್ ಟಿಕೆಟ್ ದರ ಏರಿಕೆ ಮಾಡಲಾಗುತ್ತೆ. ಈ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ಜನತೆಗೆ ಮತ್ತಷ್ಟು ಬರೆ ಎಳೆಯುವ ಕೆಲಸವನ್ನ ಸರ್ಕಾರ ಮಾಡುತ್ತಿದೆ ಅನ್ನೋದು ಎಲ್ಲೆಡೆಯಿಂದ ಕೇಳಿ ಬಂದಿತ್ತು. ಇದಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಧ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಟಿಕೆಟ್ ದರ ಏರಿಕೆ ಬಗ್ಗೆ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದ್ರೆ, ಜನರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನಷ್ಟು ಹೊರ ಮಾಡುವುದು ಬೇಡ ಎಂದಿದ್ದೇವೆ. ಹೀಗಾಗಿ ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮದ ಬಸ್ ಪ್ರಯಾಣ ದರದಲ್ಲಿ ಯಾವುದೇ ಏರಿಕೆ ಮಾಡುವುದಿಲ್ಲವೆಂದು ತಿಳಿಸಿದ್ದಾರೆ.