ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ 5ನೇ ಕಾಲಿಟ್ಟಿದೆ. ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟದಿಂದಾಗಿ ಸಾರ್ವಜನಿಕರು ಮಾತ್ರ ಪರದಾಡ್ತಿದ್ದಾರೆ. ಇದರ ನಡುವೆ ಸೋಮವಾರದಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿಯುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅತ್ತ ಸರ್ಕಾರ ವರ್ಗಾವಣೆ ವಜಾಗೊಳಿಸಿದೆ. ಮಾರ್ಚ್ ತಿಂಗಳ ಸಂಬಳ ಕೊಡುವುದಿಲ್ಲ ಅಂತಾ ಹೇಳಿದೆ.