ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಹಿಂದೆ ಸರ್ಕಾರ ಒಪ್ಪಿಕೊಂಡಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ಹೇಳಿ ಕೆಎಸ್ಆರ್ ಟಿಸಿ, ಎಂಟಿಸಿ, ಎನ್ ಡಬ್ಲುಸಿ, ಎನ್ ಕೆಎಸ್ಆರ್ ಟಿಸಿ ಸೇರಿದಂತೆ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರ ನಡೆಸಲಿವೆ.
ಬಹುಮುಖ್ಯವಾಗಿ 6ನೇ ವೇತನ ಆಯೋಗವನ್ನ ಜಾರಿ ಮಾಡಬೇಕು ಅನ್ನೋದು ಬಹುಮುಖ್ಯ ಬೇಡಿಕೆಯಾಗಿದೆ. ಸಾರಿಗೆ ನೌಕರರ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು, ವಿವಿಧ ವಾಹನಗಳ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.
ಈ ಮುಷ್ಕರದ ಬಗ್ಗೆ ಸರ್ಕಾರ ಏನು ಹೇಳುತ್ತೆ. ಈ ಹಿಂದೆ ಸಾರ್ವಜನಿಕರು ಅನುಭವಿಸಿದ ಸಮಸ್ಯೆಯನ್ನ ಈ ಬಾರಿಯೂ ಅನುಭವಿಸಬೇಕಾ ಅಥವ ಸರ್ಕಾರ ಪರ್ಯಾಯ ವ್ಯವಸ್ಥೆ ಏನಾದ್ರು ಮಾಡುತ್ತಾ ಅನ್ನೋದು ಕಾದು ನೋಡಬೇಕು.