ಸಾರಿಗೆ ನೌಕರರ ಸತ್ಯಾಗ್ರಹ

337

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಅನ್ನೋದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಎಸ್ಆರ್ ಟಿಸಿ, ಈಶಾನ್ಯ ಮತ್ತು ವಾಯುವ್ಯ ಸಾರಿಗೆ ಹಾಗೂ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕೇಂದ್ರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಜಾಥಾ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಘೋಷಣೆ ಕೂಗಿದ್ರು. ನೌಕರರಿಗೆ ಅವರ ಕುಟುಂಬಸ್ಥರು ಸಹ ಸಾಥ್ ನೀಡಿದ್ದಾರೆ. ಈ ಮೂಲಕ ಸತ್ಯಾಗ್ರಹದಲ್ಲಿ ಸಾವಿರಾರು ಜನರು ಸೇರಿದ್ದಾರೆ.

ಮಧ್ಯಾಹ್ನ 3.30ರ ತನಕ ಸತ್ಯಾಗ್ರಹ ನಡೆಯಲಿದೆ. ಸಾರಿಗೆ ನೌಕರರ ಸತ್ಯಾಗ್ರಹದಿಂದ ಸಂಚಾರ ಸೇವೆಯಲ್ಲಿ ಸಾಕಷ್ಟು ಸಮಸ್ಯೆಯಾಗಲಿದೆ ಅಂತಾ ಹೇಳಲಾಗಿತ್ತು. ಆದ್ರೆ, ಹೇಳಿಕೊಳ್ಳುವಷ್ಟು ವ್ಯತ್ಯಯ ಆಗಿಲ್ಲ. ಆದ್ರೆ, ಸಾರ್ವಜನಿಕರು ಒಂದಿಷ್ಟು ಹೈರಾಣಾಗ್ತಿರುವುದು ಮಾತ್ರ ಸತ್ಯ.




Leave a Reply

Your email address will not be published. Required fields are marked *

error: Content is protected !!