Search

ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ

207

ಪ್ರಜಾಸ್ತ್ರ ಸುದ್ದಿ

ಸಾಗರ: ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಸಾರಿಗೆ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಗ್ರಾಮದ ಹತ್ತಿರ ಶುಕ್ರವಾರ ಸಂಭವಿಸಿದೆ. ಇದಿರಿಂದಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸಾಗರದಿಂದ ಶಿವಮಗ್ಗ ಕಡೆ ಕೆಎಸ್ಆರ್ ಟಿಸ್ ಬಸ್ ಹೊರಟಿತ್ತು. ಎದುರಿಗೆ ಬೈಕ್ ವೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಈ ಅನಾಹುತ ನಡೆದಿದೆ. ಕೂಡಲೇ ಸ್ಥಳೀಯರು ಸಹಾಯಕ್ಕೆ ಬಂದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಬೈಕ್ ಸವಾರ ಮೊಬೈಲ್ ನಲ್ಲಿ ಮಾತನಾಡುತ್ತಾ ಬಂದ ಪರಿಣಾಮ ಬಸ್ ಪಲ್ಟಿಯಾಗಿದೆ ಎಂದು ಚಾಲಕ ಹಾಗೂ ಪ್ರಯಾಣಿಕರು ಹೇಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!