Search

ಹಳ್ಳಕ್ಕೆ ಇಳಿದ ಬಸ್: ಪ್ರಯಾಣಿಕರಿಗೆ ಗಾಯ

215

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ಸೊಂದು ಹಳ್ಳಕ್ಕೆ ಇಳಿದ ಘಟನೆ ಮಲೆಮಹದೇಶ್ವರ ಬೆಟ್ಟದ ತಾಳಬೆಟ್ಟದ ಹತ್ತಿರ ನಡೆದಿದೆ. ಇದರಿಂದಾಗಿ ಬಸ್ಸಿನಲ್ಲಿ 25 ಪ್ರಯಾಣಿಕರಿಗೆ ಗಾಯಗಳಾಗಿವೆ.

ದೀಪಾವಳಿ ಜಾತ್ರೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದಿದೆ. ಡ್ರೈವರ್, ಕಂಡಕ್ಟರ್ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿ 51 ಮಂದಿ ಪ್ರಯಾಣಿಕರಿದ್ದರಂತೆ. ಈ ಬಸ್ ಮದ್ದೂರು ಘಟಕಕ್ಕೆ ಸೇರಿದ್ದಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಪ್ರಾಣ ಹಾನಿ ಆಗಿಲ್ಲ.




Leave a Reply

Your email address will not be published. Required fields are marked *

error: Content is protected !!