ಪ್ರಜಾಸ್ತ್ರ ಸುದ್ದಿ
ಕುಶಾಲನಗರ: ಹೊಸಕೋಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ವೊಂದು ರಸ್ತೆಯ ಪಕ್ಕದ ಸಣ್ಣ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಿಂದ 11ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದಾಗಿ ಈ ಅನಾಹುತ ಸಂಭವಿಸಿದೆ.
ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ ಬಸ್ ನಲ್ಲಿ 44 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ತಾಂತ್ರಿಕ ದೋಷದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕಿಟಕಿ, ತುರ್ತು ನಿರ್ಗಮದ ಬಾಗಿಲು ಮೂಲಕ ಹೊರಕ್ಕೆ ತರಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.