ಮೈಸೂರು: ಗದ್ದೆಗೆ ಉರುಳಿ ಬಿದ್ದ ಬಸ್

82

ಪ್ರಜಾಸ್ತ್ರ ಸುದ್ದಿ

ಕೆ.ಆರ್ ನಗರ: ಭತ್ತದ ಗದ್ದೆಗೆ ಕೆಎಸ್ ಆರ್ ಟಿಸಿ ಬಸ್ ಉರುಳಿಬಿದ್ದ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲ ಗೇಟ್ ಹತ್ತಿರ ನಡೆದಿದೆ. ಇದರಿಂದಾಗಿ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದೆ. ಚಾಲಕನ ಒಂದು ಕೈ ಮುರಿದಿದ್ದು, ಹಲವು ಪ್ರಯಾಣಿಕರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಮೈಸೂರಿನ ಆಸ್ಪತ್ರೆಗಳಿಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!