ಮರಕ್ಕೆ ಬಸ್ ಡಿಕ್ಕಿ, ಓರ್ವ ಸಾವು

109

ಪ್ರಜಾಸ್ತ್ರ ಸುದ್ದಿ

ಹಾಸನ: ಸಾರಿಗೆ ಬಸ್ಸೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಹತ್ತಿರ ನಡೆದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹಾಸನದಿಂದ ಮಂಗಳೂರು ಕಡೆ ಹೊರಟಿದ್ದ ಬಸ್ ಎದುರಿಗೆ ಬರುತ್ತಿದ್ದ ಲಾರಿಗೆ ಜಾಗ ಬಿಡಲು ಹೋದಾಗ ಈ ಘಟನೆ ಸಂಭವಿಸಿದೆ. ರಸ್ತೆ ಪಕ್ಕದಲ್ಲಿಯೇ ಮರಗಳು ಇರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!