ಪ್ರಜಾಸ್ತ್ರ ಸುದ್ದಿ
ಹಾಸನ: ಸಾರಿಗೆ ಬಸ್ಸೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಹತ್ತಿರ ನಡೆದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹಾಸನದಿಂದ ಮಂಗಳೂರು ಕಡೆ ಹೊರಟಿದ್ದ ಬಸ್ ಎದುರಿಗೆ ಬರುತ್ತಿದ್ದ ಲಾರಿಗೆ ಜಾಗ ಬಿಡಲು ಹೋದಾಗ ಈ ಘಟನೆ ಸಂಭವಿಸಿದೆ. ರಸ್ತೆ ಪಕ್ಕದಲ್ಲಿಯೇ ಮರಗಳು ಇರುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.