ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಕೆಎಸ್ಆರ್ ಟಿಸಿ ಬಸ್ ಡಿಕ್ಕಿಯಾಗಿ ವೃದ್ಧನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಂಪಳ್ಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಬಕ್ಕಯ್ಯ ಅಲ್ಲಯ್ಯ ಮೃತ ವೃದ್ಧ ಎಂದು ತಿಳಿದು ಬಂದಿದೆ.
ಮೃತ ಬಕ್ಕಯ್ಯ ಬಹಿರ್ದೆಸೆಗೆ ಹೋಗಿ ಬರುತ್ತಿದ್ದಾಗ ಹಸರಗುಂಡಿಯಿಂದ ಯಂಪಳ್ಳಿ ಮಾರ್ಗವಾಗಿ ಚಿಂಚೋಳಿಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಚಿಂಚೋಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.