ಕೆರೆಗೆ ಉರುಳಿದ ಬಸ್: 20 ಪ್ರಯಾಣಿಕರಿಗೆ ಗಾಯ

299

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕೆಎಸ್ಆರ್ ಟಿಸಿ ಬಸ್ ವೊಂದು ಕೆರೆಗೆ ಉರುಳಿಬಿದ್ದ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಹತ್ತಿರ ನಡೆದಿದೆ. ಬೈಕ್ ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋದಾಗ ಈ ಅನಾಹುತ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಸವಾರರಾದ ದೀಪಕ ಹಾಗೂ ಪ್ರಜ್ವಲ ಸೇರಿದಂತೆ ಬಸ್ಸಿನಲ್ಲಿದ್ದ 20 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!