ಕೆಎಸ್ಆರ್ ಟಿಸಿ ಬಸ್ ಹರಿದು ಮಹಿಳೆ ಸಾವು

179

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಪ್ಯಾಲೇಸ್ ರಸ್ತೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 50 ವರ್ಷದ ಲಕ್ಷ್ಮಿದೇವಿ ಮೃತ ಮಹಿಳೆಯಾಗಿದ್ದಾರೆ.

ಚಿಂತಾಮಣಿ ನಿವಾಸಿಯಾಗಿದ್ದ ಲಕ್ಷ್ಮಿದೇವಿ ಆರೋಗ್ಯ ತಪಾಸಣೆಗಾಗಿ ಬೆಂಗಳೂರಿಗೆ ಬಂದಿದ್ದರು. ಕೊಡಗೆಹಳ್ಳಿಯಲ್ಲಿರುವ ಸಹೋದರನ ಮನೆಯಿಂದ ಆಸ್ಪತ್ರೆಗೆ ಹೊರಟಿದ್ದಾಗ, ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದಿದ್ದರಿಂದ ಮಹಿಳೆ ಕೆಳಗೆ ಬಿದಿದ್ದು ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಇದಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗುತ್ತಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!