ಪ್ರಜಾಸ್ತ್ರ ಸುದ್ದಿ
ಕೊಪ್ಪಳ: ಯಲಬುರ್ಗಾ ತಾಲೂಕಿನ ಕೆಂಪುಕೆರೆ ಬಳಿ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ 7ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಯಲಬುರ್ಗಾದಿಂದ ಗಜೇಂದ್ರಗಡಕ್ಕೆ ಬಸ್ ಬರುತಿತ್ತು. ಇದರಲ್ಲಿ 10 ಜನ ಪ್ರಯಾಣಿಕರಿದ್ದರಂತೆ. ಬಸ್ ಹೇಗೆ ಪಲ್ಟಿಯಾಗಿದೆ ಅನ್ನೋದು ತಿಳಿದು ಬಂದಿಲ್ಲ. ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.