ಭೀಕರ ಅಪಘಾತ: ತಾಯಿ, ಮಗು ಸೇರಿ ಮೂವರು ನಿಧನ

374

ಪ್ರಜಾಸ್ತ್ರ ಸುದ್ದಿ

ರಾಮನಗರ: ಕೆಎಸ್ಆರ್ ಟಿಸಿ ಬಸ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ತಾಯಿ, ಮಗು ಸೇರಿ ಮೂವರು ಮೃತಪಟ್ಟ ಘಟನೆ, ಹಲಗೂರು-ಕನಕಪುರ ಹತ್ತಿರ ನಡೆದಿದೆ.

ಉಡುಪಿ ಮೂಲದ ಅಕ್ಷತಾ, ಇವರ 6 ತಿಂಗಳ ಮಗು ಹಾಗೂ ಡ್ರೈವರ್ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರತೆ ನೋಡಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!