ಪ್ರಜಾಸ್ತ್ರ ಸುದ್ದಿ
ಶಿರಸಿ: ತಾಲೂಕಿನ ಬಂಡಲ್ ಹತ್ತಿರ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಐವರು ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ತಮಿಳುನಾಡು ಮೂಲದವರೆಂದು ಗುರುತಿಸಲಾಗಿದೆ.
ಬಸ್ ಹುಬ್ಬಳ್ಳಿಯಿಂದ ಭಟ್ಕಳ್ ಕಡೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.