ಪ್ರಜಾಸ್ತ್ರ ಸುದ್ದಿ
ಹಾಸನ: ಹೊಸ ವರ್ಷದ ಮೊದಲ ದಿನವೇ ಸಂಭವಿಸಿದೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಹತ್ತಿರ ನಡೆದಿದೆ. ಬಾಗೆ ಸಮೀಪದ ಕಾಕನಮನೆ ಗ್ರಾಮದ ಯುವಕ ಅಭಿ ಮೃತಪಟ್ಟಿದ್ದಾನೆ.
ಹೊಸ ವರ್ಷದ ಪಾರ್ಟಿ ಮುಗಿಸಿ ಹಾನುಬಾಳು ಮಾರ್ಗವಾಗಿ ಊರಿಗೆ ಹೊರಟಿದ್ದ ಇದೆ ವೇಳೆ ಸಕಲೇಶಪುರದಿಂದ ಹಾನುಬಾಳು ಕಡೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಯುವಕ ಅಭಿ ಪ್ರಾಣ ಕಳೆದುಕೊಂಡಿದ್ದಾನೆ.