ಪ್ರಜಾಸ್ತ್ರ ಸುದ್ದಿ
ಮೈಸೂರು: ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಹತ್ತಿರ ಕೆಎಸ್ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಅಪಘಾತ ನಡೆದಿದೆ. ಘಟನೆಯಲ್ಲಿ ಜೀಪ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.
ಬಸ್ ವೇಗವಾಗಿ ಬಂದು ಜೀಪ್ ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.