ಕಲಬುರಗಿಯಲ್ಲಿ ಬಸ್ ಡ್ರೈವರ್ ಹತ್ಯೆ

168

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ಕೆಎಸ್ಆರ್ ಟಿಸಿ ಚಾಲಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದೆ ಘಟನೆ ಜಿಲ್ಲೆಯ ಮಿಣಜಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಗಯ್ಯಸ್ವಾಮಿ(45) ಕೊಲೆಯಾದ ಚಾಲಕ. ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಾಗಯ್ಯಸ್ವಾಮಿ ಕಲಬುರಗಿಯ ಮಹಾದೇವ ನಗರದಲ್ಲಿ ವಾಸವಾಗಿದ್ದಾರೆ.

ಕೆಎ 32, ಎಫ್-1652 ಬಸ್ ಚಾಲನೆ ಮಾಡುತ್ತಿದ್ದರು. ಇಂದು ಮುಂಜಾನೆ ಸಹ ಎರಡು ಬಾರಿ ಮಿಣಜಿಗೆಗೆ ಹೋಗಿ ಬಂದಿದ್ದಾರೆ. ಮಿಣಜಿ ಸೂಪರ್ ಮಾರ್ಕೆಟ್ ಸಿಟಿ ಬಸ್ ನಿಲ್ದಾಣದಲ್ಲಿ ಬಸ್ಸಿನಿಂದ ಕಳೆಗೆ ಇಳಿಯುತ್ತಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ.

ಇದನ್ನು ಕಂಡ ಕಂಡಕ್ಟರ್ ಹಾಗೂ ಜನರು ಬೆಚ್ಚಿ ಬಿದ್ದಿದ್ದಾರೆ. ಕೃತ್ಯವೆಸಗಿ ಜಾಗದಿಂದ ಸ್ವಲ್ಪ ದೂರದಲ್ಲಿ ಮಾರಕಾಸ್ತ್ರಗಳಿಂದ ಎಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿಸಿಪಿ ಆಡೂರು ಶ್ರೀನಿವಾಸಲು ಭೇಟಿ ನೀಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆ ಕೊಲೆ ನಡೆದಿರಬಹುದು ಅನ್ನೋ ಶಂಕೆ ವ್ಯಕ್ತವಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!